ಬ್ರೇಕಿಂಗ್ ನ್ಯೂಸ್
26-08-21 01:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 26: ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ಯಾನೆಲ್ ಶಿಫಾರಸು ಮಾಡಿರುವ ಒಂಬತ್ತು ಮಂದಿ ನ್ಯಾಯಾಧೀಶರ ಪಟ್ಟಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಪೈಕಿ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ. ಎಲ್ಲವೂ ಅಂದ್ಕೊಂಡಂತೇ ಆದರೆ, 2027ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆಯೊಬ್ಬರು ಆಯ್ಕೆಯಾಗಲಿದ್ದಾರೆ. ಆ ಹೆಗ್ಗಳಿಕೆ ಕರ್ನಾಟಕದ ಕನ್ನಡಿಗ ಮಹಿಳೆಯೊಬ್ಬರಿಗೆ ಸಿಗಲಿದೆ ಎನ್ನುವುದು ಮಹತ್ವದ ಅಂಶ.

ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ಎ.ಎಸ್.ಓಕಾ, ನ್ಯಾಯಾಧೀಶೆ ಬಿ.ವಿ.ನಾಗರತ್ನ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟಿನ ವಿಕ್ರಮ್ ನಾಥ್, ಸಿಕ್ಕಿಂ ಹೈಕೋರ್ಟಿನ ಮುಖ್ಯ ನ್ಯಾಯಾಧೀಶೆ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟಿನ ಸಿ.ಟಿ.ರವಿಕುಮಾರ್, ಮದ್ರಾಸ್ ಹೈಕೋರ್ಟಿನ ಎಂ.ಎಂ.ಸುಂದರೇಶ್, ಗುಜರಾತ್ ಹೈಕೋರ್ಟ್ ನ್ಯಾಯಾಧೀಶ ಬೇಳ ಎಂ. ತ್ರಿವೇದಿ ಮತ್ತು ಹಿರಿಯ ವಕೀಲರಾಗಿರುವ ಪಿ.ಎಸ್. ನರಸಿಂಹ ಅವರನ್ನು ಕೊಲಿಜಿಯಂ ಸುಪ್ರೀಕೋರ್ಟಿಗೆ ಶಿಫಾರಸು ಮಾಡಿತ್ತು.
ಪ್ರಸಕ್ತ ಸುಪ್ರೀಂ ಕೋರ್ಟ್ ನಲ್ಲಿ 24 ಮಂದಿ ನ್ಯಾಯಾಧೀಶರಿದ್ದಾರೆ. ಈಗ ಒಂಬತ್ತು ಮಂದಿಯ ಸೇರ್ಪಡೆಯಾಗಿದ್ದು, ಇನ್ನೊಂದು ಸ್ಥಾನ ಖಾಲಿಯಿದೆ. ಈಗ ಶಿಫಾರಸು ಆಗಿರುವ ಮೂವರು ಮಹಿಳಾ ನ್ಯಾಯಾಧೀಶರಲ್ಲಿ ಬಿ.ವಿ.ನಾಗರತ್ನ ಹಿರಿಯರಾಗಿದ್ದು, 2027ರಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಹುದ್ದೆಗೇರಲಿದ್ದಾರೆ. ಅದಲ್ಲದೆ, ಮೊಟ್ಟಮೊದಲ ಬಾರಿಗೆ ಮಹಿಳೆಯೊಬ್ಬರು ನ್ಯಾಯಾಂಗದ ಅತ್ಯುನ್ನತ ಸ್ಥಾನ ಅಲಂಕರಿಸಲಿದ್ದಾರೆ.

1950, ಜನವರಿ 26ರಂದು ಸುಪ್ರೀಂ ಕೋರ್ಟ್ ಅಸ್ತಿತ್ವಕ್ಕೆ ಬಂದ 70 ವರ್ಷಗಳಲ್ಲಿ ಕೇವಲ ಎಂಟು ಮಂದಿ ಮಹಿಳೆಯರಷ್ಟೇ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. 1989ರಲ್ಲಿ ಫಾತಿಮಾ ಬೀವಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಪೀಠದಲ್ಲಿ ನ್ಯಾಯಾಧೀಶ ಹುದ್ದೆಗೇರಿದ್ದರು.
1962, ಅಕ್ಟೋಬರ್ 30ರಂದು ಜನಿಸಿದ್ದ ಬಿ.ವಿ.ನಾಗರತ್ನ, ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿರುವ ಇ.ಎಸ್.ವೆಂಕಟ್ರಾಮಯ್ಯ ಅವರ ಪುತ್ರಿ. 1987ರ ಅಕ್ಟೋಬರ್ 28ರಂದು ಬೆಂಗಳೂರು ಹೈಕೋರ್ಟಿನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ್ದರು.
The Centre has approved all nine names recommended by the Supreme Court Collegium for appointment to the top court. Among the approved names is Justice Nagarathna, who can go on to become the country’s first woman CJI in 2027
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am