ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm