ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm