ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm