ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.
ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.
ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm