ಬ್ರೇಕಿಂಗ್ ನ್ಯೂಸ್
            
                        27-08-21 01:13 pm Headline Karnataka News Network ದೇಶ - ವಿದೇಶ
            ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. 


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
            
            
            Afghan Muslims Should not Seek Refuge in India Says Pravin Togadia.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm