ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am