ಬ್ರೇಕಿಂಗ್ ನ್ಯೂಸ್
            
                        31-08-21 04:13 pm Headline Karnataka News Network ದೇಶ - ವಿದೇಶ
            ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್ಪೋರ್ಟ್ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ.
ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಯುತ್ತಿರುವ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಸೌದಿ ಅರೇಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಡ್ರೋನ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯಾವ ಸಂಘಟನೆಯೂ ಬಹಿರಂಗವಾಗಿ ಇದರ ಜವಾಬ್ದಾರಿ ಹೊರದ ಕಾರಣ ಈ ಕುರಿತು ಇನ್ನಷ್ಟೇ ತನಿಖೆಯಾಗಬೇಕಾಗಿದೆ. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯಕ್ಕೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.



ಇದಕ್ಕೂ ಮೊದಲು ನೈಋತ್ಯ ಯೆಮನ್ನಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು. ಈ ದುರಂತದಲ್ಲಿ ಸುಮಾರು 30 ಸೈನಿಕರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆ ಹಾಗೂ ಹೌಥಿಗಳ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಡ್ರೋನ್ ದಾಳಿ ನಡೆಸಲಾಗಿತ್ತು.
2015ರಿಂದ ಯೆಮನ್ನ ಹೌಥಿ ಬಂಡಾಯಗಾರರು ಸೌದಿ ನೇತೃತ್ವದ ಸೇನಾ ಪಡೆಯ ವಿರುದ್ಧ ಸಂಘರ್ಷ ನಡೆಸುತ್ತಿದೆ. ಮುಖ್ಯವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದ್ದು, ಇಂದು ಅಬಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದೆ.
            
            
            A drone attack on Saudi Arabia's Abha airport wounded eight people on Tuesday, said the Saudi-led coalition battling Huthi rebels in neighbouring Yemen.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm