ಜೀವ ಬೆದರಿಕೆ ಇದ್ರೂ ಮುಂಬೈಗೆ ಬಂದೇ ಬರ್ತೀನಿ ಎಂದ ನಟಿ ಕಂಗನಾಗೆ 'ವೈ ಪ್ಲಸ್' ಸೆಕ್ಯುರಿಟಿ !!

07-09-20 01:22 pm       Headline Karnataka News Network   ದೇಶ - ವಿದೇಶ

ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.

ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ  'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ. 

ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.

ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್‌ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.

ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.