ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm