ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.






ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am