ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.
ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.
ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm