ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.






ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm