ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.






ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm