ಬ್ರೇಕಿಂಗ್ ನ್ಯೂಸ್
            
                        01-09-21 09:17 pm Headline Karnataka News Network ದೇಶ - ವಿದೇಶ
            ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.






ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
            
            
            Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm