ಬ್ರೇಕಿಂಗ್ ನ್ಯೂಸ್
02-09-21 11:00 am Headline Karnataka News Network ದೇಶ - ವಿದೇಶ
ಶ್ರೀನಗರ, ಸೆ.2: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ನಾಯಕನಾಗಿ ಗುರುತಿಸಲ್ಪಟ್ಟಿದ್ದ ಸೈಯದ್ ಅಲಿ ಶಾ ಗಿಲಾನಿ ಬುಧವಾರ ರಾತ್ರಿ ಶ್ರೀನಗರದಲ್ಲಿರುವ ಹೈದರ್ ಪೋರಾ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಕೆಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗಿಲಾನಿ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ಇರಲಿಲ್ಲ. ಅವರು ಇಬ್ಬರು ಗಂಡು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. 1929ರ ಸೆಪ್ಟಂಬರ್ 29ರಂದು ಜನಿಸಿದ್ದ ಅಲಿ ಶಾ ಗಿಲಾನಿ, ಪ್ರತ್ಯೇಕತವಾದಿ ನಾಯಕರಾಗಿಯೇ ಗುರುತಿಸಿಕೊಂಡಿದ್ದರು. ಕಾಶ್ಮೀರವನ್ನು ಪ್ರತ್ಯೇಕವಾಗಿಸುವುದು ಮತ್ತು ಸ್ವತಂತ್ರ ರಾಷ್ಟ್ರವಾಗಿಸಲು ಪ್ರಯತ್ನ ಪಟ್ಟಿದ್ದರು. ಜಮಾತ್ ಇ ಇಸ್ಲಾಮೀ ಕಾಶ್ಮೀರ್ ಎನ್ನುವ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಗಿಲಾನಿ ಬಳಿಕ ತನ್ನದೇ ಆದ ತೆಹ್ರೀಕ್ ಇ ಹುರಿಯತ್ ಎಂಬ ರಾಜಕೀಯ ಪಕ್ಷ ಹುಟ್ಟುಹಾಕಿದ್ದರು.


ಸರ್ವ ಪಕ್ಷಗಳ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷರಾಗಿದ್ದ ಅಲಿ ಶಾ ಗಿಲಾನಿ, ಕಳೆದ ಬಾರಿ ಜಮ್ಮು ಕಾಶ್ಮೀರದ ವಿಶೇಷ ಪ್ರಾತಿನಿಧ್ಯವನ್ನು ತೆಗೆದುಹಾಕಿದ ಬಳಿಕ 2020 ಜೂನ್ ನಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಸೋಪೋರ್ ವಿಧಾನಸಭಾ ಕ್ಷೇತ್ರದಲ್ಲಿ 1972, 1977 ಮತ್ತು 1987ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಿಲಾನಿ ಕಾಶ್ಮೀರದ ವಿಚಾರವನ್ನು ಹಿಂಸೆಗೆ ಆಸ್ಪದ ನೀಡದೇ ಬಗೆಹರಿಸುವಂತೆ ಕರೆ ನೀಡುತ್ತಿದ್ದರು. ಆದರೆ, ಉಗ್ರವಾದಿ ಸಂಘಟನೆಗಳು ಗಿಲಾನಿ ಮಾತಿಗೆ ಸಹಮತ ನೀಡಿರಲಿಲ್ಲ. ಆನಂತರ ಉಗ್ರವಾದಿ ಸಂಘಟನೆಗಳಿಗೆ ಫಂಡಿಂಗ್ ಮತ್ತು ಹಣಕಾಸು ಸಂಗ್ರಹ ಪ್ರಕರಣದಲ್ಲಿ ಗಿಲಾನಿ ಹೆಸರು ಕೇಳಿಬಂದಿತ್ತು.
ashmiri separatist leader Syed Ali Shah Geelani died at his Hyderpora residence in Srinagar at 10.35 pm on Wednesday night. He was 91 years old.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm