ಬ್ರೇಕಿಂಗ್ ನ್ಯೂಸ್
02-09-21 11:29 am Headline Karnataka News Network ದೇಶ - ವಿದೇಶ
ಲಕ್ನೋ, ಸೆ.2: ಗೋವು ಭಾರತೀಯ ಸಂಸ್ಕೃತಿಯ ಒಂದು ಭಾಗ. ಅವುಗಳಿಗೆ ಮೂಲಭೂತ ಹಕ್ಕನ್ನು ನೀಡಬೇಕು. ಅಷ್ಟೇ ಅಲ್ಲಾ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಬೇಕು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಉತ್ತರ ಪ್ರದೇಶದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯದಡಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನು ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಅಭಿಪ್ರಾಯ ನೀಡಿದೆ. ಜಬ್ ಗಾಯೆ ಕಲ್ಯಾಣ್ ಹೋಗಾ, ತಬ್ ದೇಶ್ ಕಾ ಕಲ್ಯಾಣ್ ಹೋಗಾ(ಗೋವಿನ ರಕ್ಷಣೆ ಯಾವಾಗ ಆಗುತ್ತದೋ ಆವಾಗ ದೇಶದ ಕಲ್ಯಾಣವೂ ಆಗುತ್ತದೆ) ಎಂದು ಕೋರ್ಟ್ ಹೇಳಿದೆ.
ಗೋವಿನ ರಕ್ಷಣೆ ಮಾಡುವುದು ಯಾವುದೇ ಒಂದು ಸಮುದಾಯದ ಹೊಣೆಯಲ್ಲ. ಗೋವು ಭಾರತೀಯರ ಸಂಸ್ಕೃತಿಯಲ್ಲಿ ಅಡಕವಾಗಿದೆ. ಗೋವನ್ನು ರಕ್ಷಣೆ ಮಾಡುವುದು ಪ್ರತಿ ಭಾರತೀಯನ ಕರ್ತವ್ಯ. ಅದಕ್ಕೆ ಮತ- ಧರ್ಮದ ಭೇದ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಶೇಖರ್ ಕುಮಾರ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಅಭಿಪ್ರಾಯ ನೀಡಿದ್ದು, ಗೋವಿನ ರಕ್ಷಣೆಗಾಗಿ ಭಾರತದ ಸಂಸತ್ತು ನಿರ್ಣಯ ಸ್ವೀಕರಿಸಬೇಕು. ರಾಷ್ಟ್ರೀಯ ಪ್ರಾಣಿಯೆಂದು ಗುರುತಿಸಿ, ಅದರ ರಕ್ಷಣೆಗೆ ಮೂಲಭೂತ ಹಕ್ಕು ನೀಡಬೇಕು. ಗೋವಿನ ಹತ್ಯೆ ಅಥವಾ ಹಿಂಸೆ ಮಾಡುವುದರ ವಿರುದ್ಧ ಮಸೂದೆ ತರಬೇಕು ಎಂದು ಹೇಳಿದೆ.
ಗೋಹತ್ಯೆ ನಿಷೇಧ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಜಾವೇದ್ ಎಂಬವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿ, ಭಾರತದಲ್ಲಿ ಮಾತ್ರ ವಿವಿಧ ಮತ ಮತ್ತು ಧರ್ಮದ ಜನರು ವಾಸಿಸುತ್ತಾರೆ. ಆದರೆ, ಅವರೆಲ್ಲರ ನಂಬಿಕೆ ಬೇರೆ ಬೇರೆ ಇದ್ದರೂ ದೇಶಕ್ಕಾಗಿ ಎಲ್ಲರ ಅಭಿಪ್ರಾಯ ಒಂದೇ ಇರುತ್ತದೆ ಎಂದು ಹೇಳಿದರು.
Cow is part of India's culture, should be given fundamental rights and declared national animal, the Allahabad High Court observed on Wednesday while denying bail to a person charged under the Uttar Pradesh Prevention of Cow Slaughter Act.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm