ಬ್ರೇಕಿಂಗ್ ನ್ಯೂಸ್
02-09-21 11:29 am Headline Karnataka News Network ದೇಶ - ವಿದೇಶ
ಲಕ್ನೋ, ಸೆ.2: ಗೋವು ಭಾರತೀಯ ಸಂಸ್ಕೃತಿಯ ಒಂದು ಭಾಗ. ಅವುಗಳಿಗೆ ಮೂಲಭೂತ ಹಕ್ಕನ್ನು ನೀಡಬೇಕು. ಅಷ್ಟೇ ಅಲ್ಲಾ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಬೇಕು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಉತ್ತರ ಪ್ರದೇಶದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯದಡಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನು ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಅಭಿಪ್ರಾಯ ನೀಡಿದೆ. ಜಬ್ ಗಾಯೆ ಕಲ್ಯಾಣ್ ಹೋಗಾ, ತಬ್ ದೇಶ್ ಕಾ ಕಲ್ಯಾಣ್ ಹೋಗಾ(ಗೋವಿನ ರಕ್ಷಣೆ ಯಾವಾಗ ಆಗುತ್ತದೋ ಆವಾಗ ದೇಶದ ಕಲ್ಯಾಣವೂ ಆಗುತ್ತದೆ) ಎಂದು ಕೋರ್ಟ್ ಹೇಳಿದೆ.
ಗೋವಿನ ರಕ್ಷಣೆ ಮಾಡುವುದು ಯಾವುದೇ ಒಂದು ಸಮುದಾಯದ ಹೊಣೆಯಲ್ಲ. ಗೋವು ಭಾರತೀಯರ ಸಂಸ್ಕೃತಿಯಲ್ಲಿ ಅಡಕವಾಗಿದೆ. ಗೋವನ್ನು ರಕ್ಷಣೆ ಮಾಡುವುದು ಪ್ರತಿ ಭಾರತೀಯನ ಕರ್ತವ್ಯ. ಅದಕ್ಕೆ ಮತ- ಧರ್ಮದ ಭೇದ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಶೇಖರ್ ಕುಮಾರ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಅಭಿಪ್ರಾಯ ನೀಡಿದ್ದು, ಗೋವಿನ ರಕ್ಷಣೆಗಾಗಿ ಭಾರತದ ಸಂಸತ್ತು ನಿರ್ಣಯ ಸ್ವೀಕರಿಸಬೇಕು. ರಾಷ್ಟ್ರೀಯ ಪ್ರಾಣಿಯೆಂದು ಗುರುತಿಸಿ, ಅದರ ರಕ್ಷಣೆಗೆ ಮೂಲಭೂತ ಹಕ್ಕು ನೀಡಬೇಕು. ಗೋವಿನ ಹತ್ಯೆ ಅಥವಾ ಹಿಂಸೆ ಮಾಡುವುದರ ವಿರುದ್ಧ ಮಸೂದೆ ತರಬೇಕು ಎಂದು ಹೇಳಿದೆ.
ಗೋಹತ್ಯೆ ನಿಷೇಧ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಜಾವೇದ್ ಎಂಬವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿ, ಭಾರತದಲ್ಲಿ ಮಾತ್ರ ವಿವಿಧ ಮತ ಮತ್ತು ಧರ್ಮದ ಜನರು ವಾಸಿಸುತ್ತಾರೆ. ಆದರೆ, ಅವರೆಲ್ಲರ ನಂಬಿಕೆ ಬೇರೆ ಬೇರೆ ಇದ್ದರೂ ದೇಶಕ್ಕಾಗಿ ಎಲ್ಲರ ಅಭಿಪ್ರಾಯ ಒಂದೇ ಇರುತ್ತದೆ ಎಂದು ಹೇಳಿದರು.
Cow is part of India's culture, should be given fundamental rights and declared national animal, the Allahabad High Court observed on Wednesday while denying bail to a person charged under the Uttar Pradesh Prevention of Cow Slaughter Act.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm