ಬ್ರೇಕಿಂಗ್ ನ್ಯೂಸ್
02-09-21 12:39 pm Headline Karnataka News Network ದೇಶ - ವಿದೇಶ
Photo credits : Representational
ಲಕ್ನೋ, ಸಪ್ಟೆಂಬರ್ 2: ಕಳೆದ ಒಂದೇ ವಾರದಲ್ಲಿ ಉತ್ತರ ಪ್ರದೇಶದ ಆಗ್ರಾ, ಫಿರೋಜಬಾದ್, ಮಥುರಾ, ಮಣಿಪುರಿ ಮತ್ತು ಇಟಾ ಹಾಗೂ ಕಾಸಗಂಜ್ ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಜ್ವರ, ನಿರ್ಜಲೀಕರಣ ಮತ್ತು ಪ್ಲೆಟ್ಲೆಟ್ ಪ್ರಮಾಣದ ಹಠಾತ್ ಕುಸಿತದಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ನಿರ್ಲಕ್ಷ್ಯ ಧೋರಣೆ ಆರೋಪದಡಿ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ತೆಗೆದು ಹಾಕಲಾಗಿದ್ದು, ರೋಗ ನಿಯಂತ್ರಣಕ್ಕೆ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.


ಫಿರೋಜಬಾದ್ ಜಿಲ್ಲೆಯಲ್ಲಿನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಅದರ ಜೊತೆ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ. ಕಳೆದ ಸೋಮವಾರ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಿಗೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್, ಡೆಂಗ್ಯೂ ರೋಗದ ನಿಯಂತ್ರಣ ಮತ್ತು ನಿರ್ವಹಣೆ ಬಗ್ಗೆ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು.



ಉತ್ತರ ಪ್ರದೇಶದ ಫಿರೋಜಬಾದ್ ಜಿಲ್ಲೆಯಲ್ಲಿ ಕಳೆದ ಒಂದೇ ವಾರದಲ್ಲಿ 40 ಮಕ್ಕಳು ಪ್ರಾಣ ಬಿಟ್ಟಿದ್ದಾರೆ. ಪ್ರಾಥಮಿಕ ಕಾರಣ ಡೆಂಗ್ಯೂ ಎಂದು ತೋರುತ್ತದೆ, ಆದರೂ ಇತರ ಕಾರಣಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಆಗ್ರಾ ವಿಭಾಗೀಯ ಆಯುಕ್ತ ಅಮಿತ್ ಗುಪ್ತಾ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ. "ನಾವು ಸಂಬಂಧಪಟ್ಟ ಆಸ್ಪತ್ರೆಗಳಿಗೆ ಪ್ಲೇಟ್ಲೆಟ್ಗಳನ್ನು ಒದಗಿಸಲು ಕ್ರಮಗಳನ್ನು ಹೆಚ್ಚಿಸಿದ್ದೇವೆ ಮತ್ತು ಅವುಗಳನ್ನು ಆಗ್ರಾದಿಂದಲೂ ತರಲಾಗುತ್ತಿದೆ. ಅಧಿಕೃತ ತಂಡಗಳಿಂದ ತಪಾಸಣೆ ನಡೆಸಲಾಗುತ್ತಿದೆ," ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸಾವಿನ ಪ್ರಕರಣಗಳ ಸಂಖ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 7 ರಿಂದ 16ರವರೆಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಲು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಈ ವೇಳೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜ್ವರ ಹಾಗೂ ಕೊವಿಡ್-19 ಲಕ್ಷಣಗಳಿರುವ ಜನರ ಆರೋಗ್ಯ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
Chief Minister Yogi Adityanath visited the government hospital in the town on Monday to review the progress of treatment, and measures taken to prevent dengue.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm