ಬ್ರೇಕಿಂಗ್ ನ್ಯೂಸ್
02-09-21 09:40 pm Headline Karnataka News Network ದೇಶ - ವಿದೇಶ
ಜೈಪುರ, ಸೆ 02: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಘಟನೆ?
ಕಾಲು ಕುಚಮನಿ ಎನ್ನುವವರು ಸರ್ದಾರ್ಶಹರ್ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
Nearly 100 people fell sick with food poisoning after having meal at a wedding in Rajasthan's Churu, said an official. "Some people came to the hospital last night with a complaint of vomiting after attending a wedding in the Shobhasar village. Around 90 people were here. Today, we have discharged all of them," Reena Chhimpa, the Sub Divisional Magistrate (SDM) of Churu district's Sardarshahar told ANI.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm