ಬ್ರೇಕಿಂಗ್ ನ್ಯೂಸ್
02-09-21 10:22 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.2 : ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವಾರು ಜನ ತೊಂದರೆಗೀಡಾಗಿದ್ದಾರೆ. ಇದರ ಮಧ್ಯೆ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮಳೆಯ ನಡುವೆ ವಿದ್ಯುತ್ ಕಂಬ ಮುಟ್ಟಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗಾಜಿಯಾಬಾದ್ನ ರಾಕೇಶ್ ಮಾರ್ಗ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಳೆ ಸುರಿಯುತ್ತಿದ್ದ ಸಂದರ್ಭ ಅಂಗಡಿ ಮುಂದಿನ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ಈ ದುರ್ಘಟನೆ ನಡೆದಿದೆ.
ವ್ಯಕ್ತಿಯೋರ್ವ ತನ್ನ ಹೆಗಲಿನ ಮೇಲೆ ಪುಟಾಣಿ ಮಗುವನ್ನ ಎತ್ತಿಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ಕಂಬವನ್ನು ಅಕಸ್ಮಾತ್ ಹಿಡಿದಿದ್ದು ವಿದ್ಯುತ್ ಶಾಕ್ ಆಗಿ ಇಬ್ಬರೂ ಅಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ, ಮತ್ತೋರ್ವ ಅವರ ರಕ್ಷಣೆಗೆ ಮುಂದಾಗಿದ್ದು, ಆತನೂ ವಿದ್ಯುತ್ ಆಘಾತದಿಂದ ಪ್ರಾಣ ಬಿಟ್ಟಿದ್ದಾನೆ. ಇದಾದ ಬಳಿಕ ಅಲ್ಲಿಗೆ ಬಂದಿದ್ದ ಓರ್ವ ಮಹಿಳೆ ಸೇರಿ ಮತ್ತಿಬ್ಬರು ವಿದ್ಯುತ್ ಕಂಬ ಹಿಡಿದಿದ್ದವರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹದಿಂದ ಅವರು ಕೂಡ ಸಾವನ್ನಪ್ಪಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹೃದಯ ಕಲಕುವಂತಿದೆ.
Five people including three children and a woman died due to electrocution in Ghaziabad on Wednesday.
"Five people including three children and a woman died due to electrocution in Ghaziabad today. Two of them belong to a single family. They touched a pole that had a running electric current at a shop," said Ghaziabad ADM (City) Shailendra Kumar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm