ಬ್ರೇಕಿಂಗ್ ನ್ಯೂಸ್
            
                        03-09-21 01:11 pm Headline Karnataka News Network ದೇಶ - ವಿದೇಶ
            ನ್ಯೂಯಾರ್ಕ್, ಸೆ.3: ಅಮೆರಿಕದ ಪೂರ್ವ ಕರಾವಳಿಗೆ ಅಪ್ಪಳಿಸಿದ ಇಡಾ ಚಂಡಮಾರುತದಿಂದಾಗಿ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಕನಿಷ್ಠ 45 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಜೆರ್ಸಿಯಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆಂದು ಡೆಮಾಕ್ರಟಿಕ್ ಗವರ್ನರ್ ಫಿಲ್ ಮರ್ಫಿ ತಿಳಿಸಿದ್ದಾರೆ. ನ್ಯೂಯಾರ್ಕ್ ನಗರದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಈ ಪೈಕಿ, ಅಪಾರ್ಟ್ಮೆಂಟ್ಗಳ ಗೋಡೌನ್ನಲ್ಲಿ ಸಿಲುಕಿ 11 ಜನರು ಮೃತಪಟ್ಟಿದ್ದಾರೆ.
ಪೆನ್ಸಿಲ್ವೇನಿಯಾದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಭೀಕರ ಗಾಳಿಗೆ ಮರ ಬಿದ್ದು ಓರ್ವ ಮೃತಪಟ್ಟಿದ್ದಾನೆ. ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ವ್ಯಕ್ತಿ ತನ್ನ ಪತ್ನಿಯನ್ನು ಕಾಪಾಡಿ, ಆತ ಕಾರು ಸಮೇತ ನೀರಿನಲ್ಲಿ ಮುಳುಗಿ ಸತ್ತಿದ್ದಾನೆ. ಮೇರಿಲ್ಯಾಂಡ್, ಕನೆಕ್ಟಿಕಟ್ನಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ.





ಅಲ್ಲಿನ ಸ್ಥಳೀಯರು ಮನೆಗಳಿಗೆ ನೀರು ನುಗ್ಗದಂತೆ ತಡೆಯಲು ಯತ್ನಿಸಿದ್ದರೂ, ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಬದುಕುಳಿಯುವುದೇ ದೊಡ್ಡ ಸವಾಲಾಗಿದೆ. ಜನರು ಮನೆಯಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ, ಗಾಳಿಗೆ ರಸ್ತೆಗಳು ಹಾಳಾಗಿದ್ದು, ಮರಗಳು ಉರುಳಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆ ಮಂದಗತಿಯಲ್ಲಿ ಸಾಗಿದೆ.
ನ್ಯೂಯಾರ್ಕ್ ನಗರದಲ್ಲಿ ಗುರುವಾರ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ವಿಪರೀತ ಗಾಳಿ ಮಳೆಯ ಕಾರಣಕ್ಕೆ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಲವಾರು ನಗರಗಳು ಮುಳುಗಡೆಯಾಗಿದ್ದು, ವಾಹನಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ. ಜಲಾವೃತಗೊಂಡಿರುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿದೆ.
            
            
            New York City flooding Live updates: Dozens have died in six Eastern states Connecticut, Maryland, New Jersey, New York, Pennsylvania and Virginia after Hurricane Ida brought unprecedented rainfall to some areas.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm