ಬ್ರೇಕಿಂಗ್ ನ್ಯೂಸ್
03-09-21 01:11 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆ.3: ಅಮೆರಿಕದ ಪೂರ್ವ ಕರಾವಳಿಗೆ ಅಪ್ಪಳಿಸಿದ ಇಡಾ ಚಂಡಮಾರುತದಿಂದಾಗಿ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಕನಿಷ್ಠ 45 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಜೆರ್ಸಿಯಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆಂದು ಡೆಮಾಕ್ರಟಿಕ್ ಗವರ್ನರ್ ಫಿಲ್ ಮರ್ಫಿ ತಿಳಿಸಿದ್ದಾರೆ. ನ್ಯೂಯಾರ್ಕ್ ನಗರದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಈ ಪೈಕಿ, ಅಪಾರ್ಟ್ಮೆಂಟ್ಗಳ ಗೋಡೌನ್ನಲ್ಲಿ ಸಿಲುಕಿ 11 ಜನರು ಮೃತಪಟ್ಟಿದ್ದಾರೆ.
ಪೆನ್ಸಿಲ್ವೇನಿಯಾದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಭೀಕರ ಗಾಳಿಗೆ ಮರ ಬಿದ್ದು ಓರ್ವ ಮೃತಪಟ್ಟಿದ್ದಾನೆ. ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ವ್ಯಕ್ತಿ ತನ್ನ ಪತ್ನಿಯನ್ನು ಕಾಪಾಡಿ, ಆತ ಕಾರು ಸಮೇತ ನೀರಿನಲ್ಲಿ ಮುಳುಗಿ ಸತ್ತಿದ್ದಾನೆ. ಮೇರಿಲ್ಯಾಂಡ್, ಕನೆಕ್ಟಿಕಟ್ನಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ.





ಅಲ್ಲಿನ ಸ್ಥಳೀಯರು ಮನೆಗಳಿಗೆ ನೀರು ನುಗ್ಗದಂತೆ ತಡೆಯಲು ಯತ್ನಿಸಿದ್ದರೂ, ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಬದುಕುಳಿಯುವುದೇ ದೊಡ್ಡ ಸವಾಲಾಗಿದೆ. ಜನರು ಮನೆಯಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ, ಗಾಳಿಗೆ ರಸ್ತೆಗಳು ಹಾಳಾಗಿದ್ದು, ಮರಗಳು ಉರುಳಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆ ಮಂದಗತಿಯಲ್ಲಿ ಸಾಗಿದೆ.
ನ್ಯೂಯಾರ್ಕ್ ನಗರದಲ್ಲಿ ಗುರುವಾರ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ವಿಪರೀತ ಗಾಳಿ ಮಳೆಯ ಕಾರಣಕ್ಕೆ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಲವಾರು ನಗರಗಳು ಮುಳುಗಡೆಯಾಗಿದ್ದು, ವಾಹನಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ. ಜಲಾವೃತಗೊಂಡಿರುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿದೆ.
New York City flooding Live updates: Dozens have died in six Eastern states Connecticut, Maryland, New Jersey, New York, Pennsylvania and Virginia after Hurricane Ida brought unprecedented rainfall to some areas.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm