ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am