ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm