ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .
ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm