ಬ್ರೇಕಿಂಗ್ ನ್ಯೂಸ್
            
                        03-09-21 02:56 pm Headline Karnataka News Network ದೇಶ - ವಿದೇಶ
            ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
            
            
            No Sir and Madam Usage in This Village Gram Panchayat Office in Kerala.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm