ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm