ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm