ಬ್ರೇಕಿಂಗ್ ನ್ಯೂಸ್
06-09-21 02:36 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.6: ಯೋಗಿ ಆದಿತ್ಯನಾಥ್ ಸರಕಾರದ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ನಾಯಕ ಆಕಾಶ್ ಕುಮಾರ್ ಸಕ್ಸೇನಾ ನೀಡಿರುವ ದೂರಿನ ಪ್ರಕಾರ ರಾಮಪುರ ಜಿಲ್ಲೆಯ ಸಿವಿಲ್ ಲೈನ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಜನರ ರಕ್ತ ಹೀರುವ ಸರಕಾರ ಎಂದು ಅಜೀಜ್ ಖುರೇಷಿ ಹೇಳಿಕೆ ನೀಡಿದ್ದಾರೆ ಎಂದು ಸಕ್ಸೇನಾ ದೂರಿನಲ್ಲಿ ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮನೆಗೆ ಭೇಟಿ ನೀಡಿದ ವೇಳೆ ಅಜೀಜ್ ಖುರೇಷಿ ಈ ಹೇಳಿಕೆ ನೀಡಿದ್ದಾರೆಂದು ಸಕ್ಸೇನಾ ತಿಳಿಸಿದ್ದಾರೆ. ಖುರೇಷಿ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ಸಂಘರ್ಷ ಸೃಷ್ಟಿಯಾಗಲಿದೆ. ಅಶಾಂತಿಗೆ ಕಾರಣವಾಗಲಿದೆ ಎಂದು ಸಕ್ಸೇನಾ ತಿಳಿಸಿದ್ದು, ಇದರ ಸಾಕ್ಷ್ಯಕ್ಕಾಗಿ ಪೊಲೀಸರಿಗೆ ಹೇಳಿಕೆಯುಳ್ಳ ದಾಖಲೆಯನ್ನು ನೀಡಿದ್ದಾರೆ.

ಖುರೇಷಿ ಅವರ ವಿರುದ್ಧ 153 ಎ( ಧರ್ಮಗಳ ನಡುವೆ ವಿಷಬೀಜ ಬಿತ್ತುವುದು), 153 ಬಿ (ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವುದು), 124 ಎ (ದೇಶದ್ರೋಹ), 505(1) ಬಿ (ಸಮಾಜದಲ್ಲಿ ಭಯ ಸೃಷ್ಟಿಸುವುದು) ಸೆಕ್ಷನ್ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಅಜೀಜ್ ಖುರೇಷಿ 2014ರಿಂದ 2015ರ ವರೆಗೆ ಮಿಜೋರಾಂ ರಾಜ್ಯಪಾಲರಾಗಿದ್ದರು. ಕೆಲ ಕಾಲ ಉತ್ತರ ಪ್ರದೇಶದ ರಾಜ್ಯಪಾಲರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
Former Uttar Pradesh Governor Aziz Qureshi has been booked for sedition over his alleged derogatory remarks against the Yogi Adityanath government in the state, police said on Monday.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am