ಬ್ರೇಕಿಂಗ್ ನ್ಯೂಸ್
08-09-21 02:04 pm Headline Karnataka News Network ದೇಶ - ವಿದೇಶ
ಕಾಬೂಲ್, ಸೆ.8: ಅಫ್ಘಾನಿಸ್ತಾನದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ದೇಶಾದ್ಯಂತ ಷರೀಯತ್ ಕಾನೂನನ್ನು ಜಾರಿಗೊಳಿಸುವುದಾಗಿ ಪ್ರಕಟಿಸಿದ್ದಾರೆ. 20 ವರ್ಷಗಳ ಹಿಂದೆ ತಾಲಿಬಾನ್ ಸರಕಾರದಲ್ಲಿ ಅಳವಡಿಸಿದ್ದ ಷರೀಯತ್ ಕಾನೂನನ್ನೇ ದೇಶದ ಎಲ್ಲ ವಿಭಾಗದಲ್ಲಿಯೂ ಜಾರಿಗೊಳಿಸುವುದಾಗಿ ಹೊಸ ಸರಕಾರ ಹೇಳಿಕೊಂಡಿದೆ.
ಯಾರು ಕೂಡ ತಮ್ಮ ಭವಿಷ್ಯದ ಬಗ್ಗೆ ಚಿಂತೆ ಮಾಡುವ ಅಗತ್ಯ ಇಲ್ಲ. ನಮ್ಮ ಮೊದಲ ಆದ್ಯತೆ ಈಗಿರುವ ಎಲ್ಲ ರೀತಿಯ ಸಮಸ್ಯೆಗಳನ್ನು ಸರಿಪಡಿಸುವುದೇ ಆಗಿರುತ್ತದೆ. ಆದರೆ, ಇವೆಲ್ಲವನ್ನೂ ಷರೀಯತ್ ಕಾನೂನು ಪ್ರಕಾರವೇ ನಾವು ವ್ಯವಹರಿಸಲಿದ್ದೇವೆ. ಆದರೆ, 20 ವರ್ಷಗಳ ಸುದೀರ್ಘ ಹೋರಾಟದಲ್ಲಿ ವಿದೇಶಿಗರನ್ನು ಇಲ್ಲಿಂದ ಹೊರ ಹಾಕುವುದು ಮುಖ್ಯ ಗುರಿಯಾಗಿತ್ತು. ದೇಶದಲ್ಲಿ ಸ್ಥಿರ ಸರಕಾರ ರಚನೆ, ಸೆಂಟ್ರಲ್ ಇಸ್ಲಾಮಿಕ್ ಸಿಸ್ಟಮ್ ಜಾರಿಗೆ ತರಲಿದ್ದೇವೆ. ಇದರ ಪ್ರಕಾರ, ದೇಶದ ಎಲ್ಲ ವಿಭಾಗದ ಆಡಳಿತ ವ್ಯವಸ್ಥೆ ಮತ್ತು ಅದರ ನಿಯಮಗಳು ಷರೀಯತ್ ಕಾನೂನು ಪ್ರಕಾರವೇ ಇರಲಿದೆ ಎಂದು ತಾಲಿಬಾನ್ ಸಂಘಟನೆಯ ಸುಪ್ರೀಂ ಲೀಡರ್ ಎಂದು ಹೇಳಲಾಗುತ್ತಿರುವ ಮೌಲವಿ ಹೈಬತುಲ್ಲಾ ಅಖುಂಡಝ ಹೊಸ ಸರಕಾರದ ನೀತಿ ವ್ಯವಸ್ಥೆಯನ್ನು ಪ್ರಕಟಿಸಿದ್ದಾನೆ.


ತಾಲಿಬಾನ್ ಸಂಘಟನೆಯ ನೀತಿ ನಿರ್ಧಾರಕ ಮಂಡಳಿ ರೆಹ್ ಬಾರಿ ಶೂರ ಇದರ ಪ್ರಮುಖನಾಗಿರುವ ಮುಲ್ಲಾ ಮಹಮ್ಮದ್ ಹಸನ್ ಅಖುಂಡ್ ಪ್ರಧಾನಿ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿರುವ ಈವರೆಗೂ ಅಧ್ಯಕ್ಷ ಪದವಿಗೇರಲಿದ್ದಾನೆ ಎಂದು ಹೇಳಲಾಗಿದ್ದ ಅಬ್ದುಲ್ ಘನಿ ಬರಾದಾರ್ ಉಪ ಪ್ರಧಾನಿ ಸ್ಥಾನದಲ್ಲಿ ಇರಲಿದ್ದಾನೆ ಎಂದು ತಾಲಿಬಾನ್ ವಕ್ತಾರ ಝಬೀವುಲ್ಲಾ ಮುಜಾಹಿದ್ ಹೇಳಿಕೆ ನೀಡಿದ್ದಾನೆ. 33 ಮಂದಿ ಸಚಿವರನ್ನು ಒಳಗೊಂಡ ಹೊಸ ಸರಕಾರವನ್ನು ತಾಲಿಬಾನ್ ಅಸ್ತಿತ್ವಕ್ಕೆ ತಂದಿದೆ. ಆದರೆ, ಜಾಗತಿಕ ಉಗ್ರರೆಂದು ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಮತ್ತು ಹಕ್ಕಾನಿ ನೆಟ್ವರ್ಕ್ ನಲ್ಲಿ ಸಕ್ರಿಯರಾಗಿರುವ ಉಗ್ರರಿಗೆ ಸರಕಾರದಲ್ಲಿ ಪ್ರಮುಖ ಸ್ಥಾನಗಳನ್ನು ನೀಡಲಾಗಿದೆ.
The Taliban have also issued a policy statement to assure the Afghans that “no one should be worried about the future" and also added that they will follow Sharia law for all matters.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm