ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಪೂರ್ಣ ನಿರ್ಬಂಧ

08-09-21 04:24 pm       Headline Karnataka News Network   ದೇಶ - ವಿದೇಶ

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲಾಗಿದೆ.

ನವದೆಹಲಿ, ಸೆ.8: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸ್ಪಷ್ಟ ನಿರ್ದೇಶನ ನೀಡಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶನ ಉತ್ಸವ ನಡೆಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಸಾರ್ವಜನಿಕ ಪ್ರದೇಶದಲ್ಲಿ ಟೆಂಟ್ ಅಥವಾ ಪೆಂಡಾಲ್ ಹಾಕಿ ಗಣೇಶನ ಉತ್ಸವ ನಡೆಸುವಂತಿಲ್ಲ. ಇದರ ಜೊತೆಗೆ ಧಾರ್ಮಿಕ ಸ್ಥಳಗಳಲ್ಲಿ ಜನರು ಹೆಚ್ಚು ಸೇರದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಯಾವುದೇ ಮೆರವಣಿಗೆಗೂ ಅವಕಾಶ ನೀಡುವುದಿಲ್ಲ. ಮನೆಯಲ್ಲಿಯೇ ಗಣೇಶನ ಹಬ್ಬ ಆಚರಿಸುವಂತೆ ಹೇಳಿದೆ.

ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ನಿರ್ಬಂಧಗಳನ್ನು ಅನುಸರಿಸಿ ಸಾರ್ವಜನಿಕ ನೆಲೆಯಲ್ಲಿ ಹಬ್ಬದ ಆಚರಣೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಈ ಕುರಿತ ಆದೇಶದಲ್ಲಿ ತಿಳಿಸಲಾಗಿದೆ. 

The Delhi Disaster Management Authority (DDMA) has said that Ganesh Chaturthi celebrations at public places will not be allowed in the national capital in view of the COVID-19 pandemic.