ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm