ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
28-03-24 01:44 pm
Bangalore Correspondent
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
Kolar congress fight: ಕೋಲಾರ ಕಾಂಗ್ರೆಸಿನಲ್ಲಿ ಭಿ...
27-03-24 05:03 pm
28-03-24 01:15 pm
HK News Desk
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
America Ship, Baltimore bridge video; ಅಮೇರಿಕಾ...
27-03-24 04:56 pm
27-03-24 10:53 pm
Mangalore Correspondent
Bjp MLA Harish poonja, Shivaraj Tangadagi: ಹಿ...
27-03-24 09:11 pm
ಮತ್ತೆ ನಾಲ್ವರ ಮೇಲೆ ಗೂಂಡಾ ಕಾಯ್ದೆ ; ಮತ್ತೆ 13 ಮಂದ...
26-03-24 10:17 pm
Tumkur car burnt, three killed, Mangalore: ಬೆ...
26-03-24 09:57 pm
Brijesh Chowta Mangalore; ದೇಶದಲ್ಲಿ ಭಯಮುಕ್ತ ವಾ...
26-03-24 08:45 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am