ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am