ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 02:39 pm
HK News Staffer
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm