ಬ್ರೇಕಿಂಗ್ ನ್ಯೂಸ್
10-09-21 04:54 pm Headline Karnataka News Network ದೇಶ - ವಿದೇಶ
ದೆಹಲಿ, ಸೆ.10: ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಯಕರು ತೊರೆದು ಬೇರೆ ಪಕ್ಷಗಳಿಗೆ ಸೇರುತ್ತಿರುವುದು ಹೆಚ್ಚುತ್ತಿದೆ. ಕಳೆದ ಏಳು ವರ್ಷಗಳಲ್ಲಿ ಕಾಂಗ್ರೆಸ್ ತೊರೆಯುವವರ ಸಂಖ್ಯೆ ಹೆಚ್ಚಿದ್ದು, ಗಣನೀಯ ಪ್ರಮಾಣದಲ್ಲಿ ಅಭ್ಯರ್ಥಿಗಳು, ಸಂಸದರು, ಶಾಸಕರು ಪಕ್ಷ ಬಿಟ್ಟು ಹೋಗಿರುವುದು ಅಧ್ಯಯನದಲ್ಲಿ ಕಂಡುಬಂದಿದೆ.
ಗುರುವಾರ ಬಿಡುಗಡೆಯಾದ ವರದಿಯ ಪ್ರಕಾರ 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸಿನ ಅತಿ ಹೆಚ್ಚು ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
2014 - 21ರ ನಡುವೆ ನಡೆದ ವಿವಿಧ ಚುನಾವಣೆಗಳ ಸಂದರ್ಭದಲ್ಲಿ ಒಟ್ಟು 222 ಅಭ್ಯರ್ಥಿಗಳು ಕಾಂಗ್ರೆಸ್ ತೊರೆದು ಇತರ ಪಕ್ಷಗಳನ್ನು ಸೇರಿದ್ದಾರೆ. ಇದೇ ಅವಧಿಯಲ್ಲಿ 177 ಸಂಸದರು ಮತ್ತು ಹಲವು ಶಾಸಕರು ಪಕ್ಷವನ್ನು ತೊರೆದಿದ್ದಾರೆ ಎಂದು ರಾಷ್ಟ್ರೀಯ ಚುನಾವಣೆ ಮತ್ತು ರಾಜಕೀಯ ಅಧ್ಯಯನ ಸಂಸ್ಥೆ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ - ಎಡಿಆರ್’ ತಿಳಿಸಿದೆ.
2014ರಿಂದ ಈವರೆಗಿನ ಚುನಾವಣೆಗಳಲ್ಲಿ 111 ಅಭ್ಯರ್ಥಿಗಳು ಬಿಜೆಪಿ ತೊರೆದಿದ್ದಾರೆ. 33 ಸಂಸದರು ಮತ್ತು ಶಾಸಕರನ್ನು ಬಿಜೆಪಿ ಕಳೆದುಕೊಂಡಿದೆ. ಆದರೂ, 253 ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು 173 ಸಂಸದರು ಮತ್ತು ಶಾಸಕರು ಬಿಜೆಪಿಯನ್ನು ಸೇರಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ. ಈ ಮೂಲಕ ಏಳು ವರ್ಷಗಳಲ್ಲಿ ಬಿಜೆಪಿ ಅತಿ ಹೆಚ್ಚು ನಾಯಕರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸಫಲವಾಗಿದೆ.
ಕಳೆದ ಏಳು ವರ್ಷಗಳಲ್ಲಿ 399 ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರೂ, 115 ಅಭ್ಯರ್ಥಿಗಳು, 61 ಸಂಸದರು ಮತ್ತು ಶಾಸಕರು ಇತರ ಪಕ್ಷಗಳಿಂದ ಕಾಂಗ್ರೆಸ್ಗೆ ಬಂದಿದ್ದಾರೆ. ಎಡಿಆರ್ ವರದಿಯು 1,133 ಅಭ್ಯರ್ಥಿಗಳು ಮತ್ತು 500 ಸಂಸದರು–ಶಾಸಕರ ಚುನಾವಣಾ ಅಫಿಡವಿಟ್ಗಳ ವಿಶ್ಲೇಷಣೆಯನ್ನು ಆಧರಿಸಿದೆ. 2014ರಿಂದ ಈ ವರೆಗೆ ಲೋಕಸಭೆ ಮತ್ತು ವಿಧಾನಸಭೆಗಳಿಗೆ ನಡೆದ ಚುನಾವಣೆಗಳನ್ನು ಆಧರಿಸಿ ಅಧ್ಯಯನ ಮಾಡಲಾಗಿದೆ.
ಕಾಂಗ್ರೆಸ್ ನಂತರ, ಉತ್ತರ ಪ್ರದೇಶದ ಮಾಯಾವತಿಯ ಬಹುಜನ ಸಮಾಜ ಪಕ್ಷವನ್ನು (ಬಿಎಸ್ಪಿ) ಗಣನೀಯ ಸಂಖ್ಯೆಯ ನಾಯಕರು ತೊರೆದಿದ್ದಾರೆ.
2014ರಿಂದ ಈ ವರೆಗೆ 153 ಅಭ್ಯರ್ಥಿಗಳು ಮತ್ತು 20 ಸಂಸದ–ಶಾಸಕರು ಇತರೆ ಪಕ್ಷ ಸೇರಲು ಬಿಎಸ್ಪಿ ತೊರೆದಿದ್ದಾರೆ. ಆದಾಗ್ಯೂ, ಬಿಎಸ್ಪಿ 65 ಅಭ್ಯರ್ಥಿಗಳು ಮತ್ತು 12 ಸಂಸದ– ಶಾಸಕರನ್ನು ತನ್ನ ತೆಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) 31 ಅಭ್ಯರ್ಥಿಗಳು, 26 ಸಂಸದ– ಶಾಸಕರು ಕಳೆದ ಏಳು ವರ್ಷಗಳಲ್ಲಿ ಬೇರೆ ಪಕ್ಷವನ್ನು ಸೇರಿದ್ದಾರೆ. ಒಟ್ಟು 23 ಅಭ್ಯರ್ಥಿಗಳು ಮತ್ತು 31 ಸಂಸದ–ಶಾಸಕರು ಈ ಅವಧಿಯಲ್ಲಿ ಪಕ್ಷ ಸೇರಿದ್ದಾರೆ.
Congress lost Highest number of Leaders to other Parties Since 2014 BJP Big Gainer Report.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm