ಬ್ರೇಕಿಂಗ್ ನ್ಯೂಸ್
10-09-21 04:54 pm Headline Karnataka News Network ದೇಶ - ವಿದೇಶ
ದೆಹಲಿ, ಸೆ.10: ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಯಕರು ತೊರೆದು ಬೇರೆ ಪಕ್ಷಗಳಿಗೆ ಸೇರುತ್ತಿರುವುದು ಹೆಚ್ಚುತ್ತಿದೆ. ಕಳೆದ ಏಳು ವರ್ಷಗಳಲ್ಲಿ ಕಾಂಗ್ರೆಸ್ ತೊರೆಯುವವರ ಸಂಖ್ಯೆ ಹೆಚ್ಚಿದ್ದು, ಗಣನೀಯ ಪ್ರಮಾಣದಲ್ಲಿ ಅಭ್ಯರ್ಥಿಗಳು, ಸಂಸದರು, ಶಾಸಕರು ಪಕ್ಷ ಬಿಟ್ಟು ಹೋಗಿರುವುದು ಅಧ್ಯಯನದಲ್ಲಿ ಕಂಡುಬಂದಿದೆ.
ಗುರುವಾರ ಬಿಡುಗಡೆಯಾದ ವರದಿಯ ಪ್ರಕಾರ 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸಿನ ಅತಿ ಹೆಚ್ಚು ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

2014 - 21ರ ನಡುವೆ ನಡೆದ ವಿವಿಧ ಚುನಾವಣೆಗಳ ಸಂದರ್ಭದಲ್ಲಿ ಒಟ್ಟು 222 ಅಭ್ಯರ್ಥಿಗಳು ಕಾಂಗ್ರೆಸ್ ತೊರೆದು ಇತರ ಪಕ್ಷಗಳನ್ನು ಸೇರಿದ್ದಾರೆ. ಇದೇ ಅವಧಿಯಲ್ಲಿ 177 ಸಂಸದರು ಮತ್ತು ಹಲವು ಶಾಸಕರು ಪಕ್ಷವನ್ನು ತೊರೆದಿದ್ದಾರೆ ಎಂದು ರಾಷ್ಟ್ರೀಯ ಚುನಾವಣೆ ಮತ್ತು ರಾಜಕೀಯ ಅಧ್ಯಯನ ಸಂಸ್ಥೆ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ - ಎಡಿಆರ್’ ತಿಳಿಸಿದೆ.

2014ರಿಂದ ಈವರೆಗಿನ ಚುನಾವಣೆಗಳಲ್ಲಿ 111 ಅಭ್ಯರ್ಥಿಗಳು ಬಿಜೆಪಿ ತೊರೆದಿದ್ದಾರೆ. 33 ಸಂಸದರು ಮತ್ತು ಶಾಸಕರನ್ನು ಬಿಜೆಪಿ ಕಳೆದುಕೊಂಡಿದೆ. ಆದರೂ, 253 ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು 173 ಸಂಸದರು ಮತ್ತು ಶಾಸಕರು ಬಿಜೆಪಿಯನ್ನು ಸೇರಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ. ಈ ಮೂಲಕ ಏಳು ವರ್ಷಗಳಲ್ಲಿ ಬಿಜೆಪಿ ಅತಿ ಹೆಚ್ಚು ನಾಯಕರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸಫಲವಾಗಿದೆ.
ಕಳೆದ ಏಳು ವರ್ಷಗಳಲ್ಲಿ 399 ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರೂ, 115 ಅಭ್ಯರ್ಥಿಗಳು, 61 ಸಂಸದರು ಮತ್ತು ಶಾಸಕರು ಇತರ ಪಕ್ಷಗಳಿಂದ ಕಾಂಗ್ರೆಸ್ಗೆ ಬಂದಿದ್ದಾರೆ. ಎಡಿಆರ್ ವರದಿಯು 1,133 ಅಭ್ಯರ್ಥಿಗಳು ಮತ್ತು 500 ಸಂಸದರು–ಶಾಸಕರ ಚುನಾವಣಾ ಅಫಿಡವಿಟ್ಗಳ ವಿಶ್ಲೇಷಣೆಯನ್ನು ಆಧರಿಸಿದೆ. 2014ರಿಂದ ಈ ವರೆಗೆ ಲೋಕಸಭೆ ಮತ್ತು ವಿಧಾನಸಭೆಗಳಿಗೆ ನಡೆದ ಚುನಾವಣೆಗಳನ್ನು ಆಧರಿಸಿ ಅಧ್ಯಯನ ಮಾಡಲಾಗಿದೆ.

ಕಾಂಗ್ರೆಸ್ ನಂತರ, ಉತ್ತರ ಪ್ರದೇಶದ ಮಾಯಾವತಿಯ ಬಹುಜನ ಸಮಾಜ ಪಕ್ಷವನ್ನು (ಬಿಎಸ್ಪಿ) ಗಣನೀಯ ಸಂಖ್ಯೆಯ ನಾಯಕರು ತೊರೆದಿದ್ದಾರೆ.
2014ರಿಂದ ಈ ವರೆಗೆ 153 ಅಭ್ಯರ್ಥಿಗಳು ಮತ್ತು 20 ಸಂಸದ–ಶಾಸಕರು ಇತರೆ ಪಕ್ಷ ಸೇರಲು ಬಿಎಸ್ಪಿ ತೊರೆದಿದ್ದಾರೆ. ಆದಾಗ್ಯೂ, ಬಿಎಸ್ಪಿ 65 ಅಭ್ಯರ್ಥಿಗಳು ಮತ್ತು 12 ಸಂಸದ– ಶಾಸಕರನ್ನು ತನ್ನ ತೆಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) 31 ಅಭ್ಯರ್ಥಿಗಳು, 26 ಸಂಸದ– ಶಾಸಕರು ಕಳೆದ ಏಳು ವರ್ಷಗಳಲ್ಲಿ ಬೇರೆ ಪಕ್ಷವನ್ನು ಸೇರಿದ್ದಾರೆ. ಒಟ್ಟು 23 ಅಭ್ಯರ್ಥಿಗಳು ಮತ್ತು 31 ಸಂಸದ–ಶಾಸಕರು ಈ ಅವಧಿಯಲ್ಲಿ ಪಕ್ಷ ಸೇರಿದ್ದಾರೆ.
Congress lost Highest number of Leaders to other Parties Since 2014 BJP Big Gainer Report.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm