ಬ್ರೇಕಿಂಗ್ ನ್ಯೂಸ್
11-09-21 05:29 pm Headline Karnataka News Network ದೇಶ - ವಿದೇಶ
ದೆಹಲಿ, ಸೆ.11 :ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯ ಮೇಲೆ ಮಳೆಯ ನೀರು ನಿಂತು ಸಂಚಾರಕ್ಕೆ ಅಡಚಣೆಯನ್ನುಂಟು ಮಾಡಿದೆ. ಬೆಳಗ್ಗೆಯಿಂದಲೇ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಭಾರೀ ಮಳೆ ನಗರದ ವಾತಾವರಣವನ್ನು ಸಂಪೂರ್ಣವಾಗಿ ಬದಲಾಯಿಸಿದೆ.
ಭಾರೀ ಮಳೆಯಿಂದಾಗಿ ನಗರದ ಐಐಟಿ ಗೇಟ್ ಬಳಿಯ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆಯುಂಟಾಗಿದ್ದು, ನಿಧಾನಗತಿಯ ಟ್ರಾಫಿಕ್ ಚಲನೆ ಇರುವುದರಿಂದ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ.
1975ರಲ್ಲಿ ಇದೇ ರೀತಿ ದೆಹಲಿಯಲ್ಲಿ ಅತಿಹೆಚ್ಚು ಮಳೆಯಾಗಿತ್ತು. ಅಂದು 1.150 ಮಿಮೀ ಮಳೆಯಾಗಿತ್ತು. ಈ ಬಾರಿ 1,00 ಮಿಮೀ ಮಳೆಯಾಗಿದೆ. ಶನಿವಾರ ಬೆಳಗ್ಗೆಯೇ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಮಳೆಗಾಲ ಮುಗಿಯುವ ಮುನ್ನವೇ ಈ ಬಾರಿ ಭಾರೀ ಮಳೆಯಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ 648.9 ಮಿಮೀ ಮಳೆ ನಿರೀಕ್ಷೆ ಮಾಡಲಾಗುವುದು ಎಂದು ಐಎಂಡಿ ತಿಳಿಸಿದೆ.


ಭಾರೀ ಮಳೆಯಿಂದ ವಿಮಾನ ಸಂಚಾರ ರದ್ದುಗೊಂಡಿದೆ. ಇನ್ನು 38 ಜನ ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ವಿಮಾನವೊಂದು ಮಳೆಯಿಂದಾಗಿ, ಪಲಂ ಪ್ಲೈಓವರ್ ಬಳಿ ಸಿಲುಕಿಕೊಂಡಿತು. ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ವಾಹನ ಪ್ರಯಾಣಿಕರ ರಕ್ಷಣೆ ಮಾಡಿದೆ.
ಗುರುಗಾವ್ನ ರಾಷ್ಟ್ರೀಯ ಹೆದ್ದಾರಿ 48 ಕೂಡ ಸಂಪೂರ್ಣವಾಗಿ ಜಲಾವೃತ್ಒಂಡಿದೆ. ಇಲ್ಲೂ ಕೂಡ ಟ್ರಾಫಿಕ್ ಸಮಸ್ಯೆಯಿಂದ ಜನರು ಸಂಕಷ್ಟ ಅನುಭವಿಸಿದರು. ರಾಣಿ ಖೇಡಾ ಅಂಡರ್ಪಾಸ್ನಲ್ಲಿ 3-4 ಅಡಿ ನೀರು ನಿಂತ ಪರಿಣಾಮ ಟ್ರಾಫಿಕ್ ಉಲ್ಬಣಗೊಂಡಿದೆ.
ಕಳೆದ 24 ಗಂಟೆಗಳಲ್ಲಿ ನಗರದಲ್ಲಿ 97 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮೋಡ ಕವಿದ ವಾತಾವರಣವನ್ನು ಊಹಿಸಲಾಗಿತ್ತು. ಜೊತೆಗೆ ನಗರದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




ಶುಕ್ರವಾರ ಬೆಳಿಗ್ಗೆ 8.30 ರಿಂದ ಶನಿವಾರ ಬೆಳಿಗ್ಗೆ 8.30 ರ ನಡುವೆ 94.7 ಮಿಮೀ ಮಳೆಯಾಗಿದೆ. ಶನಿವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ ಎಂದು ಸಫ್ದರ್ಜಂಗ್ ವೀಕ್ಷಣಾಲಯ ತಿಳಿಸಿದೆ.
ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತ್ತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತಿದೆ. ಅನೇಕ ಅಂಡರ್ಪಾಸ್ಗಳನ್ನು ನೀರು ನದಿಯಂತೆ ಹರಿಯುತ್ತಿದೆ. ಈ ಹಿನ್ನಲೆ ವಾಹನ ಸಂಚಾರಿಗಳು ಸಾಕಷ್ಟು ಸಮಸ್ಯೆ ಅನುಭವಿಸುವಂತೆ ಆಗಿದೆ.


ಇನ್ನು ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಕೂಡ ನೀರು ನುಗ್ಗಿದ ಪರಿಣಾಮ ಜನರು ಸಾಕಷ್ಟು ಸಮಸ್ಯೆ ಅನುಭವಿಸುವಂತೆ ಆಗಿದೆ. ಸ್ಪೈಸ್ ಜೆಟ್ ವಿಮಾನ ನಿಲ್ದಾಣ ಸ್ಥಳಗಳಲ್ಲಿ ನೀರು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ದೆಹಲಿಯ ಕೆಲವು ಸ್ಥಳಗಳಲ್ಲಿ ಅಂದರೆ , ಅಕ್ಷರಧಾಮ, ಶಹಾದ್ರಾ, ಪ್ರೀತ್ ವಿಹಾರ್, ಎನ್ಸಿಆರ್ನ ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಲೋನಿ ದೇಹತ್, ಹಿಂಡನ್ ಎಫ್ ಇಂದಿರಪುರಂ, ಚಪ್ರೌಲಾ ದಲ್ಲಿ ಭಾರೀ ಗುಡುಗು ಮಿಂಚಿನ ಮಳೆಯಾಗಲಿದ್ದು, ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
This is Delhi airport terminal which now has been renamed as ferry terminal pic.twitter.com/8wAvA88Y83
— Dhananjay Singh (@KunwarDJAY) September 11, 2021
As heavy rains continued in Delhi Saturday morning, parts of Indira Gandhi International Airport was inundated with water. Videos circulating on Twitter showed a waterlogged airport.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm