ಬ್ರೇಕಿಂಗ್ ನ್ಯೂಸ್
01-08-20 04:18 pm Special Correspondant ದೇಶ - ವಿದೇಶ
ರಾಂಚಿ, ಆಗಸ್ಟ್ 1: ಮಧ್ಯಪ್ರದೇಶ, ರಾಜಸ್ಥಾನದ ಬಳಿಕ ಜಾರ್ಖಂಡಿನಲ್ಲಿಯೂ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಜೆಎಂಎಂ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಗ್ಗೆ ಅಸಮಾಧಾನಗೊಂಡಿರುವ 15 ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದ್ದು ಸೊರೇನ್ ಸರಕಾರದ ಮೇಲೆ ತೂಗುಗತ್ತಿ ಶುರುವಾಗಿದೆ.
ಜಾರ್ಖಂಡಿನಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್ ಮೈತ್ರಿಯ ಸರಕಾರ ಆಡಳಿತದಲ್ಲಿದೆ. ಜೆಎಂಎಂ ಪಕ್ಷದ ಸಿಎಂ ಹೇಮಂತ್ ಸೊರೇನ್, ಸಿಎಂ ಸೇರಿ 11 ಮಂದಿ ಸಚಿವ ಸ್ಥಾನಗಳನ್ನು ಮಾತ್ರ ತುಂಬಿದ್ದು, ಇನ್ನೊಂದು ಸ್ಥಾನವನ್ನು ಖಾಲಿ ಇಟ್ಟಿದ್ದಾರೆ. ಈ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸಿನ ಕೆಲವು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ಹಿರಿಯ ಶಾಸಕರಾದ ಇರ್ಫಾನ್ ಅನ್ಸಾರಿ, ಉಮಾಶಂಕರ್ ಅಲೇಖ ಮತ್ತು ರಾಜೇಶ್ ಕಶ್ಯಪ್ ದೆಹಲಿಗೆ ತೆರಳಿದ್ದು, ಹಿರಿಯ ನಾಯಕರಿಗೆ ದೂರು ನೀಡಿದ್ದಾರೆ. ಅಲ್ಲದೆ, ಟ್ರಬಲ್ ಶೂಟರ್ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸಿಎಂ ಸೊರೇನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ದೆಹಲಿ ನಾಯಕರು ತಮ್ಮ ಅಹವಾಲಿಗೆ ಸ್ಪಂದಿಸಿಲ್ಲ ಎನ್ನುತ್ತಿರುವ ಅಸಮಾಧಾನಿತ ಕಾಂಗ್ರೆಸ್ ಗುಂಪು, ಗೃಹ ಸಚಿವರೂ ಆಗಿರುವ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಮೇಶ್ವರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ರಾಂಚಿಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ. ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದ ಜೆವಿಎಂ ಪಕ್ಷದ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ, ಮತ್ತೆ ಸರಕಾರ ರಚನೆಗೆ ಕಸರತ್ತು ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ, ಒಂದಷ್ಟು ಕಾಂಗ್ರೆಸ್ ಶಾಸಕರು ಬಿಜೆಪಿಯತ್ತ ವಾಲಿದರೂ ಸದ್ಯಕ್ಕೆ ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿ ಸರಕಾರ ಪತನವಾಗಲಾರದು. ಯಾಕಂದ್ರೆ, 81 ಸದಸ್ಯಬಲದ ಜಾರ್ಖಂಡಿನಲ್ಲಿ ಜೆಎಂಎಂ 29, ಕಾಂಗ್ರೆಸ್ 15, ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದರೆ, ಆರ್ ಜೆಡಿ, ಎನ್ ಸಿಪಿ ಮತ್ತು ಸಿಪಿಐಎಂ ತಲಾ ಒಂದೊಂದು ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸಿನ 15 ಶಾಸಕರೂ ಬಿಜೆಪಿಯತ್ತ ಬಂದರೆ ಮಾತ್ರ ಸರಕಾರ ಬೀಳುವ ಸಾಧ್ಯತೆಯಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm