ಬ್ರೇಕಿಂಗ್ ನ್ಯೂಸ್
12-09-21 10:18 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.12 : ಗುಜರಾತ್ ನೂತನ ಸಿಎಂ ಸ್ಥಾನಕ್ಕೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಭಾನುವಾರ ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ದಿಢೀರ್ ಆಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಯಾರ ಬರಲಿದ್ದಾರೆ ಎಂಬ ಬಗ್ಗೆ ಭಾರೀ ಕುತೂಹಲ ಎದ್ದಿತ್ತು. ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಮಾಜಿ ಸಚಿವ ಗೋರ್ಧಾನ್ ಝದಾಫಿಯಾ, ಲಕ್ಷದ್ವೀಪ, ದಾದರ್, ನಗರ ಹವೇಲಿಯ ಆಡಳಿತಾಧಿಕಾರಿ ಆಗಿರುವ ಪ್ರಫುಲ್ ಪಟೇಲ್ ಹೆಸರು ಭಾರೀ ರೇಸಿನಲ್ಲಿತ್ತು. ಇದಲ್ಲದೆ, ಗುಜರಾತ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಹೆಸರು ಕೂಡ ಚಾಲ್ತಿಯಲ್ಲಿತ್ತು.

ಆದರೆ, ಸಿಎಂ ಗಾದಿಯ ರೇಸಿನಲ್ಲಿದ್ದ ಎಲ್ಲರ ಹೆಸರನ್ನೂ ಹಿಂದಿಕ್ಕಿ ಭೂಪೇಂದ್ರ ಪಟೇಲ್ ಇಂದು ನಡೆದ ಸಭೆಯಲ್ಲಿ ಶಾಸಕಾಂಗ ಸಭೆಯಲ್ಲಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭೂಪೇಂದ್ರ ಪಟೇಲ್ ಘಾಟ್ಲೋಡಿಯಾ ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಬಾರಿಗೆ 2017ರಲ್ಲಿ ಶಾಸಕರಾಗಿದ್ದರು. ಅದಕ್ಕೂ ಮುನ್ನ ಅಹ್ಮದಾಬಾದ್ ಮಹಾನಗರ ಪಾಲಿಕೆಯಲ್ಲಿ ಸದಸ್ಯರಾಗಿದ್ದಲ್ಲದೆ, ಅಹ್ಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಶಾಸಕಾಂಗ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ಹಾಗೂ ನರೇಂದ್ರ ಸಿಂಗ್ ತೋಮರ್ ಗಾಂಧಿನಗರಕ್ಕೆ ಬಂದಿದ್ದರು.
ಇಂಜಿನಿಯರಿಂಗ್ ಪದವೀಧರನಾಗಿರುವ ಪಟೇಲ್, ಗುಜರಾತಿನಲ್ಲಿ ಪ್ರಬಲವಾಗಿರುವ ಪಾಟೀದಾರ್ ಸಮುದಾಯಕ್ಕೆ ಸೇರಿದವರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಆಪ್ತರು ಎನ್ನಲಾಗುತ್ತಿದ್ದು, ಇದೇ ಕಾರಣದಿಂದ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಚುನಾವಣೆ ಕಾಲದಲ್ಲಿ ಸಿಎಂ ಸ್ಥಾನಕ್ಕೆ ಏರಿದ್ದಾರೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಪಟೇಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
The BJP on Sunday named first-time MLA Bhupendra Patel as the next chief minister of Gujarat, a day after Vijay Rupani stepped down from the post.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm