ಬ್ರೇಕಿಂಗ್ ನ್ಯೂಸ್
12-09-21 10:18 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.12 : ಗುಜರಾತ್ ನೂತನ ಸಿಎಂ ಸ್ಥಾನಕ್ಕೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಭಾನುವಾರ ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ದಿಢೀರ್ ಆಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಯಾರ ಬರಲಿದ್ದಾರೆ ಎಂಬ ಬಗ್ಗೆ ಭಾರೀ ಕುತೂಹಲ ಎದ್ದಿತ್ತು. ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಮಾಜಿ ಸಚಿವ ಗೋರ್ಧಾನ್ ಝದಾಫಿಯಾ, ಲಕ್ಷದ್ವೀಪ, ದಾದರ್, ನಗರ ಹವೇಲಿಯ ಆಡಳಿತಾಧಿಕಾರಿ ಆಗಿರುವ ಪ್ರಫುಲ್ ಪಟೇಲ್ ಹೆಸರು ಭಾರೀ ರೇಸಿನಲ್ಲಿತ್ತು. ಇದಲ್ಲದೆ, ಗುಜರಾತ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಹೆಸರು ಕೂಡ ಚಾಲ್ತಿಯಲ್ಲಿತ್ತು.

ಆದರೆ, ಸಿಎಂ ಗಾದಿಯ ರೇಸಿನಲ್ಲಿದ್ದ ಎಲ್ಲರ ಹೆಸರನ್ನೂ ಹಿಂದಿಕ್ಕಿ ಭೂಪೇಂದ್ರ ಪಟೇಲ್ ಇಂದು ನಡೆದ ಸಭೆಯಲ್ಲಿ ಶಾಸಕಾಂಗ ಸಭೆಯಲ್ಲಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭೂಪೇಂದ್ರ ಪಟೇಲ್ ಘಾಟ್ಲೋಡಿಯಾ ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಬಾರಿಗೆ 2017ರಲ್ಲಿ ಶಾಸಕರಾಗಿದ್ದರು. ಅದಕ್ಕೂ ಮುನ್ನ ಅಹ್ಮದಾಬಾದ್ ಮಹಾನಗರ ಪಾಲಿಕೆಯಲ್ಲಿ ಸದಸ್ಯರಾಗಿದ್ದಲ್ಲದೆ, ಅಹ್ಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಶಾಸಕಾಂಗ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ಹಾಗೂ ನರೇಂದ್ರ ಸಿಂಗ್ ತೋಮರ್ ಗಾಂಧಿನಗರಕ್ಕೆ ಬಂದಿದ್ದರು.
ಇಂಜಿನಿಯರಿಂಗ್ ಪದವೀಧರನಾಗಿರುವ ಪಟೇಲ್, ಗುಜರಾತಿನಲ್ಲಿ ಪ್ರಬಲವಾಗಿರುವ ಪಾಟೀದಾರ್ ಸಮುದಾಯಕ್ಕೆ ಸೇರಿದವರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಆಪ್ತರು ಎನ್ನಲಾಗುತ್ತಿದ್ದು, ಇದೇ ಕಾರಣದಿಂದ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಚುನಾವಣೆ ಕಾಲದಲ್ಲಿ ಸಿಎಂ ಸ್ಥಾನಕ್ಕೆ ಏರಿದ್ದಾರೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಪಟೇಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
The BJP on Sunday named first-time MLA Bhupendra Patel as the next chief minister of Gujarat, a day after Vijay Rupani stepped down from the post.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm