ಬ್ರೇಕಿಂಗ್ ನ್ಯೂಸ್
14-09-21 04:13 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆ.14: ತಮಿಳುನಾಡು ಸರಕಾರ ನೀಟ್ ಪರೀಕ್ಷೆಯನ್ನು ರದ್ದುಪಡಿಸಿ, ನೂತನ ಕಾಯ್ದೆಯನ್ನೇ ಜಾರಿಗೆ ತಂದಿದೆ. ನೀಟ್ ಪರೀಕ್ಷೆ ಕುಳಿತುಕೊಳ್ಳಲು ಸಾಧ್ಯವಾಗಲ್ಲ ಎಂದು 19 ವರ್ಷದ ವಿದ್ಯಾರ್ಥಿಯೊಬ್ಬ ಸೇಲಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ನೇರವಾಗಿ ಮೆಡಿಕಲ್, ಇಂಜಿನಿಯರಿಂಗ್ ಸೀಟು ಗಿಟ್ಟಿಸುವಂತೆ ಹೊಸ ಮಸೂದೆ ಜಾರಿಗೆ ತಂದಿದ್ದಾರೆ.
ಸೋಮವಾರ ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರೋಧಿ ಮಸೂದೆ ಜಾರಿಗೊಳಿಸಿದ್ದು, ಅದರ ಬಳಿಕ ತಮ್ಮ ಸರಕಾರದ ನಡೆಯನ್ನು ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ. ನೀಟ್ ಕಾರಣಕ್ಕೆ ಬಹಳಷ್ಟು ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಅದರಿಂದ ವಿನಾಯ್ತಿ ಪಡೆಯುವ ನಿಟ್ಟಿನಲ್ಲಿ ನಾವು ಮಸೂದೆ ಪಾಸ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಈ ಮಸೂದೆ ಪ್ರಕಾರ, ಮೆಡಿಕಲ್, ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳು ತಮ್ಮ ಪ್ಲಸ್ ಟು ಅಥವಾ ಪಿಯುಸಿ ಅಂಕದ ಆಧಾರದಲ್ಲಿಯೇ ಈ ಹಿಂದಿನ ರೀತಿಯಲ್ಲೇ ಉನ್ನತ ಶಿಕ್ಷಣಕ್ಕೆ ಸೇರಲು ಅವಕಾಶ ಕೊಟ್ಟಿದೆ.
2013ರಿಂದ ಮೆಡಿಕಲ್ ಪದವಿಗೆ ಸೇರಲು ರಾಷ್ಟ್ರ ಮಟ್ಟದಲ್ಲಿ ಅರ್ಹತಾ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಈ ಪ್ರಸ್ತಾವಕ್ಕೆ ಮೊದಲಿನಿಂದಲೂ ತಮಿಳುನಾಡು ಸರಕಾರ ವಿರೋಧಿಸುತ್ತ ಬಂದಿತ್ತು. ನೀಟ್ ಪರೀಕ್ಷೆ ಮೆಡಿಕಲ್ ಅಡ್ಮಿಶನ್ ಮಾಡಿಕೊಳ್ಳಲು ಸೂಕ್ತ ವ್ಯವಸ್ಥೆಯಲ್ಲ ಎಂದು ಹೇಳಿತ್ತು. ಈ ಬಾರಿ ಸೆ.12ರಂದು ಮಧ್ಯಾಹ್ನ 2ರಿಂದ 5ರ ವರೆಗೆ ದೇಶಾದ್ಯಂತ ನೀಟ್ ಪರೀಕ್ಷೆ ನಡೆಸಲಾಗಿತ್ತು. ಮರುದಿನವೇ ತಮಿಳುನಾಡು ಅಸೆಂಬ್ಲಿಯಲ್ಲಿ ನೀಟ್ ಪರೀಕ್ಷೆಯನ್ನು ತಮಿಳುನಾಡಿನಲ್ಲಿ ರದ್ದುಗೊಳಿಸಿ ಹೊಸ ಮಸೂದೆ ಜಾರಿಗೊಳಿಸಿದ್ದಾರೆ. ಈ ಬಾರಿಯೂ ನೀಟ್ ಪರೀಕ್ಷೆ ಬಯಸಿ ಅರ್ಜಿ ಸಲ್ಲಿಸಿದ್ದ ಏಳು ಶೇಕಡಾ ಮಂದಿಗೆ ದೇಶದಲ್ಲಿ ಅವಕಾಶ ಸಿಕ್ಕಿರಲಿಲ್ಲ.
ಸಾಮಾಜಿಕ ನ್ಯಾಯದ ಕಲ್ಪನೆಯಡಿ ತಾರತಮ್ಯ ರಹಿತ, ಎಲ್ಲರಿಗೂ ಸಮಾನ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಮತ್ತು ಉನ್ನತ ಶಿಕ್ಷಣದ ಅವಕಾಶ ಸಮಾಜದ ಎಲ್ಲ ವರ್ಗದವರಿಗೂ ಸಿಗುವಂತೆ ಮಾಡಲು ಈ ರೀತಿಯ ನೀಟ್ ಎಕ್ಸಾಂ ಜಾರಿಗೆ ತರಲಾಗಿದೆ ಎಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿ ಜಯಲಲಿತಾ ಸರಕಾರ ಇದ್ದಾಗಲೂ ಕೇಂದ್ರ ಸರಕಾರ ನೀಟ್ ಪರೀಕ್ಷೆ ಕಡ್ಡಾಯಗೊಳಿಸಿದ್ದನ್ನು ವಿರೋಧಿಸಲಾಗಿತ್ತು. ಇದೇ ಕಾರಣಕ್ಕೆ ಈ ಬಾರಿ ಡಿಎಂಕೆ ಸರಕಾರ ನೀಟ್ ವಿರೋಧಿ ಮಸೂದೆ ಜಾರಿಗೆ ತಂದಾಗ, ಎಐಎಡಿಎಂಕೆ ಶಾಸಕರು ಕೂಡ ಬೆಂಬಲ ನೀಡಿದ್ದಾರೆ.
The Tamil Nadu government will introduce a Bill in the Assembly on September 13 seeking President’s assent to exempt the state from the ambit of National Eligibility-cum-Entrance Test (NEET), a day after the death of a 19-year-old boy. Tamil Nadu Chief Minister MK Stalin, on September 12, assured to pass a Bill in the Assembly to "permanently exempt" the state's medical aspirants from taking NEET.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm