ಬ್ರೇಕಿಂಗ್ ನ್ಯೂಸ್
16-09-21 04:00 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆ.16: ಬ್ಯಾಂಕ್ ಸಿಬಂದಿಯ ತಪ್ಪಿನಿಂದಾಗಿ ಗ್ರಾಮಸ್ಥನೊಬ್ಬನ ಖಾತೆಗೆ 1.61 ಲಕ್ಷ ರೂಪಾಯಿ ಪಾವತಿ ಆಗಿತ್ತು. ಬ್ಯಾಂಕಿನಿಂದ ತನ್ನಿಂತಾನೇ ತನ್ನ ಖಾತೆಗೆ ಇಷ್ಟೊಂದು ಹಣ ಬಿದ್ದಿರುವುದನ್ನು ಕಂಡ ಆ ವ್ಯಕ್ತಿ ಪ್ರಧಾನಿ ಮೋದಿಯೇ ತನ್ನ ಖಾತೆಗೆ ಹಣ ಹಾಕಿದ್ದಾಗಿ ತಿಳಿದು ಖರ್ಚು ಮಾಡತೊಡಗಿದ್ದ. ಆನಂತರ ಬ್ಯಾಂಕ್ ಸಿಬಂದಿ ಎಡವಟ್ಟು ತಿಳಿದು ಆತನಲ್ಲಿ ಹಣ ಕೇಳಿದಾಗ, ಮೋದಿ ಕೊಟ್ಟ ಹಣವೆಂದು ಹೇಳಿ ಹಿಂತಿರುಗಿಸಲು ನಿರಾಕರಿಸಿದ್ದಾನೆ.
ಮಾನ್ಸಿ ಎಂಬಲ್ಲಿ ಈ ಘಟನೆ ನಡೆದಿದ್ದು ದಕ್ಷಿಣ್ ಗ್ರಾಮೀಣ ಬ್ಯಾಂಕಿನ ಭಕ್ತಿಯಾರ್ ಪುರ ಶಾಖೆಯ ಸಿಬಂದಿ ಬೇರೆಯವರ ಖಾತೆಗೆ ಹಾಕಬೇಕಿದ್ದ ಹಣವನ್ನು ತಪ್ಪಾಗಿ ರಂಜಿತ್ ಕುಮಾರ್ ದಾಸ್ ಎನ್ನುವ ವ್ಯಕ್ತಿಗೆ ಹಾಕಿದ್ದರು. ಬರೋಬ್ಬರಿ 1,60,970 ರೂಪಾಯಿ ಹಣ ಹೆಚ್ಚುವರಿಯಾಗಿ ತನ್ನ ಖಾತೆಗೆ ಬಿದ್ದಿದ್ದನ್ನು ನೋಡಿದ ರಂಜಿತ್ ಕುಮಾರ್ ದಾಸ್, ಮೋದಿ ತನ್ನ ಖಾತೆಗೆ ಹಣ ಹಾಕಿದ್ದಾರೆಂದು ತಿಳಿದು ಬೇಕಾಬಿಟ್ಟಿ ಖರ್ಚು ಮಾಡಲಾರಂಭಿಸಿದ್ದ. ಮೋದಿ ಯಾವುದೋ ಯೋಜನೆ ಹೆಸರಲ್ಲಿ, ತನ್ನ ಖಾತೆಗೆ ಹಣ ಹಾಕಿಸಿದ್ದಾರೆ ಎಂದುಕೊಂಡಿದ್ದ.


ಆನಂತರ, 85 ವರ್ಷದ ಮಹಿಳೆಯ ಖಾತೆಗೆ ಹಣ ಪಾವತಿಯಾಗದೇ ಇರುವ ಬಗ್ಗೆ ಆಕೆಯ ಕುಟುಂಬಸ್ಥರು ಬ್ಯಾಂಕ್ ಸಿಬಂದಿಯಲ್ಲಿ ವಿಚಾರಿಸಿದ್ದರು. ಬ್ಯಾಂಕ್ ಸಿಬಂದಿ ಪರಿಶೀಲನೆ ನಡೆಸಿದಾಗ ರಂಜಿತ್ ಕುಮಾರ್ ಹೆಸರಲ್ಲಿ ಹಣ ವರ್ಗಾವಣೆಯಾಗಿದ್ದು ಕಂಡುಬಂದಿತ್ತು. ರಂಜಿತ್ ಬಳಿ ಹಣ ಹಿಂತಿರುಗಿಸುವಂತೆ ಹೇಳಿದರೆ, ಆತ ನಿರಾಕರಿಸಿದ್ದಾನೆ. ಮೋದಿಯೇ ನನಗೆ ಹಣ ಹಾಕಿದ್ದಾರೆ. ಅದನ್ನು ನಾನು ಯಾಕೆ ಹಿಂತಿರುಗಿಸಬೇಕು ಎಂದು ಕೇಳಿದ್ದಾನೆ.

ರಂಜಿತ್ ಗೆ ಬ್ಯಾಂಕ್ ಮ್ಯಾನೇಜರ್ ನೋಟೀಸ್ ನೀಡಿದರೂ, ಕ್ಯಾರ್ ಮಾಡಿಲ್ಲ. ಆಬಳಿಕ, ಬ್ಯಾಂಕ್ ಮ್ಯಾನೇಜರ್ ಸತ್ಯನಾರಾಯಣ ಪ್ರಸಾದ್ ಮಾನ್ಸಿ ಠಾಣೆಯಲ್ಲಿ ರಂಜಿತ್ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ರಂಜಿತ್ ನನ್ನು ಬಂಧಿಸಿದ್ದಾರೆ. 85 ವರ್ಷದ ತಾರಾದೇವಿ ಎಂಬ ಮಹಿಳೆಯ ಖಾತೆಗೆ ಹಣ ಹಾಕಬೇಕಿತ್ತು. ಬ್ಯಾಂಕ್ ಸಿಬಂದಿಯ ತಪ್ಪಿನಿಂದಾಗಿ ತಾನು ದುಡಿದಿಟ್ಟ ಹಣ ಯಾರದ್ದೋ ಪಾಲಾಗಿದ್ದು ಚಿಂತೆಗೆ ಕಾರಣವಾಗಿತ್ತು. ಅಜ್ಜಿಯ ಕುಟುಂಬಸ್ಥರು ದೂರು ನೀಡಿದ ಬಳಿಕ ಬ್ಯಾಂಕ್ ಸಿಬಂದಿ ಕೊನೆಗೂ ಪೊಲೀಸ್ ಮೆಟ್ಟಿಲೇರಿದ್ದಾರೆ. ಮೋದಿ ಹಣದ ಆಸೆಯಲ್ಲಿದ್ದ ಗ್ರಾಮಸ್ಥ ಜೈಲುಪಾಲಾಗಿದ್ದಾನೆ.
A resident of Bihar’s Khagaria received Rs 1.61 lakh in his account after a bank error and has now refused to let go of the money saying it was sent by Prime Minister Narendra Modi as financial aid.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm