ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.



ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm