ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am