ಬ್ರೇಕಿಂಗ್ ನ್ಯೂಸ್
17-09-21 10:28 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.17 : ಜಿಎಸ್ಟಿ ಮಂಡಳಿ ಸಭೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲನ್ನು ಜಿಎಸ್ಟಿ ವ್ಯಾಪ್ತಿಗೆ ತರುವಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯಗಳು ಒಮ್ಮತಕ್ಕೆ ಬರಲು ವಿಫಲವಾಗಿವೆ. ಪೆಟ್ರೋಲಿಯಂ ಉತ್ಪನ್ನಗಳಿಂದ ರಾಜ್ಯ ಮತ್ತು ಕೇಂದ್ರಕ್ಕೆ ಭರಪೂರ ತೆರಿಗೆಯ ಲಾಭ ದಕ್ಕುತ್ತಿರುವುದರಿಂದ ಇದನ್ನು ಬಿಟ್ಟುಕೊಡಲು ರಾಜ್ಯಗಳು ಕೂಡ ಒಪ್ಪುತ್ತಿರಲಿಲ್ಲ.
ಕೇಂದ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಡಿ ಏಕರೂಪದ ತೆರಿಗೆಗೆ ಒಳಪಡಿಸುವ ಪ್ರಸ್ತಾವಕ್ಕೆ ಮೊದಲಿನಿಂದಲೂ ಕೆಲವು ರಾಜ್ಯಗಳು ವಿರೋಧ ಸೂಚಿಸಿದ್ದವು. ಒಂದೂವರೆ ವರ್ಷಗಳ ನಂತರ ಜಿಎಸ್ಟಿ ಮಂಡಳಿಯ ಸಭೆ ಇಂದು ಲಕ್ನೋದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದಿತ್ತು. ಸಭೆಯಲ್ಲಿ ಕೆಲವು ಔಷಧಿಗಳಿಗೆ ರಿಯಾಯ್ತಿ ನೀಡಿದರೆ, ಕೆಲವು ಉತ್ಪನ್ನಗಳಿಗೆ ಹೆಚ್ಚುವರಿಯಾಗಿ ತೆರಿಗೆ ವಿಧಿಸಲಾಗಿದೆ.

ಆದರೆ, ಪೆಟ್ರೋಲ್, ಡೀಸೆಲ್ ಬಗ್ಗೆ ಅಭಿಪ್ರಾಯ ನೀಡುವುದಕ್ಕೆ ರಾಜ್ಯಗಳು ವಿರೋಧ ಸೂಚಿಸಿವೆ. ಹಾಗಾಗಿ, ಈ ಸಭೆಯಲ್ಲಿ ಇದರ ಬಗ್ಗೆ ಚರ್ಚೆಯೇ ಬೇಡವೆಂದು ಸಚಿವೆ ನಿರ್ಮಲಾ ಸೀತಾರಾಮನ್ ನಿರ್ಧಾರಕ್ಕೆ ಬಂದಿದ್ದಾರೆ. ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಬರುತ್ತಾ ಅನ್ನುವ ನಿರೀಕ್ಷೆ ದೇಶಾದ್ಯಂತ ಇತ್ತು. ಕಳೆದ ನಾಲ್ಕು ತಿಂಗಳಿಂದ ಒಂದೇ ಸಮನೆ ತೈಲ ದರ ಏರಿಕೆ ಆಗಿದ್ದರಿಂದ ತೆರಿಗೆಯನ್ನು ಇಳಿಸಲೇಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು. ಜನ ಸಾಮಾನ್ಯರಿಗೂ ತೈಲ ದರ ಭಾರೀ ಹೊರೆ ಆಗಿರುವುದರಿಂದ ತೆರಿಗೆ ಇಳಿಸುವಂತೆ ಆಗ್ರಹ ಬಂದಿತ್ತು.
ಈ ನಡುವೆ, ಕೇರಳ ಹೈಕೋರ್ಟಿನಲ್ಲಿ ಇದೇ ವಿಚಾರದ ಅರ್ಜಿಯಲ್ಲಿ ವಿಚಾರಣೆ ನಡೆದು ಕೇಂದ್ರ ಸರಕಾರಕ್ಕೆ ನೋಟೀಸ್ ನೀಡಲಾಗಿತ್ತು. ಜಿಎಸ್ಟಿ ವ್ಯಾಪ್ತಿಗೆ ಯಾಕೆ ತರಲಾಗಿಲ್ಲ ಎಂದು ಪ್ರಶ್ನಿಸಿ, ಆರು ವಾರದಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿತ್ತು.
Finance Minister Nirmala Sitharaman is chairing the 45th Goods and Services Tax (GST) Council meeting today in Lucknow. The crucial meeting is expected to review over 50 items in the form of rate changes and clarifications.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am