ಬ್ರೇಕಿಂಗ್ ನ್ಯೂಸ್
18-09-21 12:53 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆ 18 : ಭಾರತದಲ್ಲಿ ಶುಕ್ರವಾರ ಒಂದೇ ದಿನ 2.5 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ ಎಂದು ಸರ್ಕಾರ ಪ್ರಕಟಿಸಿದೆ.
ಈ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿರುವುದನ್ನು ಕೇಂದ್ರ ಆರೋಗ್ಯ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, "ಇಂದಿನ ದಾಖಲೆ ಸಂಖ್ಯೆಯ ಲಸಿಕೆ ನೀಡಿಕೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡಬೇಕು" ಎಂದು ಹೇಳಿದ್ದರು. ಇದಕ್ಕೆ ಕಠಿಣ ಪರಿಶ್ರಮ ವಹಿಸಿದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಪ್ರಧಾನಿ ಮೋದಿ ಹುಟ್ಟುಹಬ್ಬದಂದು 2.5 ಕೋಟಿ ಲಸಿಕೆ ಡೋಸ್ ನೀಡಲು ಗುರಿ ನಿಗದಿಪಡಿಸಲಾಗಿತ್ತು. ಆದರೆ ಗುರಿ ಮೀರಿ 10390 ಹೆಚ್ಚುವರಿ ಡೋಸ್ ನೀಡಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ. ಚೀನಾದಲ್ಲಿ ಇದುವರೆಗಿನ ಗರಿಷ್ಠ ಅಂದರೆ ಜೂನ್ನಲ್ಲಿ ಒಂದೇ ದಿನ 2.47 ಕೋಟಿ ಮಂದಿಗೆ ಲಸಿಕೆ ನೀಡಲಾಗಿತ್ತು.
ಸಂಜೆಯ ವೇಳೆಗೆ ಭಾರತದ ಲಸಿಕೆ ನೀಡಿಕೆ ಸಂಖ್ಯೆ ಎರಡು ಕೋಟಿ ದಾಟಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಕಚೇರಿ ಟ್ವೀಟ್ ಮಾಡಿ ಭಾರತವನ್ನು ಅಭಿನಂದಿಸಿತ್ತು.

ಸರ್ಕಾರದ ಟ್ರ್ಯಾಕರ್ ಪ್ರಕಾರ ಪ್ರತಿ ಸೆಕೆಂಡಿಗೆ 800 ಲಸಿಕಾ ಡೋಸ್ಗಳನ್ನು ನೀಡಲಾಗಿದ್ದು, ನಿಮಿಷಕ್ಕೆ 48 ಸಾವಿರದಂರೆ ಲಸಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯಸ್ಥ ಆರ್.ಎಸ್.ಶರ್ಮಾ ಹೇಳಿದ್ದಾರೆ. ಒಂದು ತಿಂಗಳ ನಿರಂತರ ಪ್ರಯತ್ನದಿಂದ ಈ ಮೈಲುಗಲ್ಲು ಸಾಧಿಸಲಾಗಿದೆ ಎಂದು ಸರ್ಕಾರಿ ತಜ್ಞ ಡಾ.ಎನ್.ಕೆ.ಅರೋರಾ ಅಭಿಪ್ರಾಯಪಟ್ಟಿದ್ದಾರೆ.
Congratulations india!
— Mansukh Mandaviya (@mansukhmandviya) September 17, 2021
PM @NarendraModi जी के जन्मदिवस पर भारत ने आज इतिहास रच दिया है।
2.50 करोड़ से अधिक टीके लगा कर देश और विश्व के इतिहास में स्वर्णिम अध्याय लिखा है।
आज का दिन हेल्थकर्मियों के नाम रहा। #HealthArmyZindabad pic.twitter.com/F2EC5byMdt
India crossed 2.5 crore Covid vaccinations in a day for the first time on Friday as the government raced to deliver a record on Prime Minister Narendra Modi's birthday. At 11:58 pm, Union Health Minister Mansukh Mandaviya tweeted to confirm the "historic" figure..
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm