ಬ್ರೇಕಿಂಗ್ ನ್ಯೂಸ್
09-09-20 03:20 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 9: ಮುಂಬೈನಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕಚೇರಿ ತೆರವುಗೊಳಿಸುತ್ತಿರುವುದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಕಚೇರಿ ತೆರವುಗೊಳಿಸುವ ಕ್ರಮವನ್ನು ಪ್ರಶ್ನಿಸಿ ಕಂಗಾನಾ ಪರ ವಕೀಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ತೆರವು ಕಾರ್ಯಾಚರಣೆಗೆ ತಡೆ ನೀಡಿದ್ದು, ಕಂಗನಾ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸರ್ಕಾರವನ್ನು ಕೇಳಿದೆ. ಈ ಮೂಲಕ ಕಂಗನಾ ಮಹಾ ಸರ್ಕಾರದ ವಿರುದ್ಧ ಬಹುದೊಡ್ಡ ಗೆಲುವು ಸಾಧಿಸಿದಂತಿದೆ.

ಇಂದು ಬೆಳಗ್ಗೆಯಷ್ಟೇ ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯಿಂದ ಹೊರಟ ಕಂಗನಾ ಮುಂಬೈಗೆ ಮರಳಿದ್ದಾರೆ. ಅವರು ಮುಂಬೈಗೆ ಆಗಮಿಸುವ ಮುಂಚೆಯೇ ಮಹಾ ಸರ್ಕಾರ ಕಚೇರಿಯ ತೆರವು ಕಾರ್ಯಾಚರಣೆ ನಡೆಸುತ್ತಿತ್ತು.
ಮುಂಬೈ ಅನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ತೊಡೆತಟ್ಟಿದ್ದಾರೆ. ಇಂದು ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ಕಂಗನಾ, ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಗೂಂಡಾಗಳು ಮುಂಬೈನಲ್ಲಿರುವ ನನ್ನ ಕಚೇರಿಯನ್ನು ಅಕ್ರಮವಾಗಿ ನೆಲಸಮ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.
ಸೋಮವಾರವಷ್ಟೇ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಚೇರಿಗೆ ಭೇಟಿ ನೀಡಿ, ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸೀಲ್ ಮಾಡಿದ್ದರು. ಅಲ್ಲದೆ, ಪರಿಶೀಲನೆ ಬಳಿಕ 14 ನಿಯಮ ಉಲ್ಲಂಘನೆಗಳ ಪಟ್ಟಿ ಸಹ ಮಾಡಿದ್ದರು. ನೆಲಸಮ ಮಾಡುವುದಾಗಿಯೂ ನೋಟಿಸ್ ಸಹ ಹೊರಡಿಸಿದ್ದರು.
ಸೋಮವಾರ ನೀಡಿದ್ದ ನೋಟೀಸ್ನಲ್ಲಿ ಹೇಗೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ನಮೂದಿಸಲಾಗಿತ್ತು. ಅಷ್ಟೇ ಅಲ್ಲ, 24 ಗಂಟೆಗಳಲ್ಲಿ ಈ ನೋಟೀಸ್ಗೆ ಉತ್ತರ ಕೊಡದಿದ್ದ ಪಕ್ಷದಲ್ಲಿ, ಅತಿಕ್ರಮವಾಗಿ ನಿರ್ಮಿಸಲಾದ ಭಾಗವನ್ನು ಒಡೆಯುವುದಾಗಿ ಈ ನೋಟೀಸ್ನಲ್ಲಿ ಹೇಳಲಾಗಿತ್ತು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm