ಬ್ರೇಕಿಂಗ್ ನ್ಯೂಸ್
09-09-20 03:20 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 9: ಮುಂಬೈನಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕಚೇರಿ ತೆರವುಗೊಳಿಸುತ್ತಿರುವುದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಕಚೇರಿ ತೆರವುಗೊಳಿಸುವ ಕ್ರಮವನ್ನು ಪ್ರಶ್ನಿಸಿ ಕಂಗಾನಾ ಪರ ವಕೀಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ತೆರವು ಕಾರ್ಯಾಚರಣೆಗೆ ತಡೆ ನೀಡಿದ್ದು, ಕಂಗನಾ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸರ್ಕಾರವನ್ನು ಕೇಳಿದೆ. ಈ ಮೂಲಕ ಕಂಗನಾ ಮಹಾ ಸರ್ಕಾರದ ವಿರುದ್ಧ ಬಹುದೊಡ್ಡ ಗೆಲುವು ಸಾಧಿಸಿದಂತಿದೆ.

ಇಂದು ಬೆಳಗ್ಗೆಯಷ್ಟೇ ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯಿಂದ ಹೊರಟ ಕಂಗನಾ ಮುಂಬೈಗೆ ಮರಳಿದ್ದಾರೆ. ಅವರು ಮುಂಬೈಗೆ ಆಗಮಿಸುವ ಮುಂಚೆಯೇ ಮಹಾ ಸರ್ಕಾರ ಕಚೇರಿಯ ತೆರವು ಕಾರ್ಯಾಚರಣೆ ನಡೆಸುತ್ತಿತ್ತು.
ಮುಂಬೈ ಅನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ತೊಡೆತಟ್ಟಿದ್ದಾರೆ. ಇಂದು ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ಕಂಗನಾ, ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಗೂಂಡಾಗಳು ಮುಂಬೈನಲ್ಲಿರುವ ನನ್ನ ಕಚೇರಿಯನ್ನು ಅಕ್ರಮವಾಗಿ ನೆಲಸಮ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.
ಸೋಮವಾರವಷ್ಟೇ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಚೇರಿಗೆ ಭೇಟಿ ನೀಡಿ, ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸೀಲ್ ಮಾಡಿದ್ದರು. ಅಲ್ಲದೆ, ಪರಿಶೀಲನೆ ಬಳಿಕ 14 ನಿಯಮ ಉಲ್ಲಂಘನೆಗಳ ಪಟ್ಟಿ ಸಹ ಮಾಡಿದ್ದರು. ನೆಲಸಮ ಮಾಡುವುದಾಗಿಯೂ ನೋಟಿಸ್ ಸಹ ಹೊರಡಿಸಿದ್ದರು.
ಸೋಮವಾರ ನೀಡಿದ್ದ ನೋಟೀಸ್ನಲ್ಲಿ ಹೇಗೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ನಮೂದಿಸಲಾಗಿತ್ತು. ಅಷ್ಟೇ ಅಲ್ಲ, 24 ಗಂಟೆಗಳಲ್ಲಿ ಈ ನೋಟೀಸ್ಗೆ ಉತ್ತರ ಕೊಡದಿದ್ದ ಪಕ್ಷದಲ್ಲಿ, ಅತಿಕ್ರಮವಾಗಿ ನಿರ್ಮಿಸಲಾದ ಭಾಗವನ್ನು ಒಡೆಯುವುದಾಗಿ ಈ ನೋಟೀಸ್ನಲ್ಲಿ ಹೇಳಲಾಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm